September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

ಮಡಂತ್ಯಾರು: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ.14 ರಂದು ಜರುಗಿತು.

ಸೇ. ಹಾ. ಚರ್ಚಿನ ಪ್ರಧಾನ ಧರ್ಮಗುರುಗಳು ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕ್ರಿಸ್ತ ಜಯಂತಿ ನಾವು ಡಿ.25 ರಂದು ಆಚರಿಸುತ್ತೇವೆ. ದೇವರು ಬಡವರಾಗಿ ಮಾನವ ರೂಪ ತಾಳಿ ಈ ಧರೆಗೆ ಬಂದದ್ದು ನಮ್ಮನ್ನು ಶ್ರೀಮಂತಗೊಳಿಸಲು. ದೇವರು 2025 ವರ್ಷದ ಹಿಂದೆ ಕಿಸ್ತನ ಜನನದ ಸಂದೇಶ ಸಾರಲು ಕುರುಬರನ್ನು ಮತ್ತು ನಕ್ಷತ್ರವನ್ನು ಮಾಧ್ಯಮವಾಗಿ ಉಪಯೋಗಿಸಿದರು. ಕ್ರಿಸ್ಮಸ್ ಸರ್ವರ ಹಬ್ಬ, ಎಲ್ಲರೂ ಸಂತೋಷ ಪಡಬೇಕು” ಎಂದು ಹೇಳಿದರು.

ಮುಖ್ಯ ಅತಿಥಿ ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾತನಾಡಿ ಮದರ್ ತೆರೆಜಾರವರು ಮಾನವ ಸೇವೆಯ ಮುಖಾಂತರ ದೇವರ ಸೇವೆ ಮಾಡಿದರು. ಡಿ.25 ದೇವ ಮಾನವ ಹುಟ್ಟಿದ ದಿನ. ಜನನ-ಮರಣ ಅದರ ಮಧ್ಯೆ ಜೀವನ. ನಮ್ಮಲ್ಲಿ ಒಂದೇ ಜಾತಿ, ಒಂದೆ ಮತ, ಒಂದೇ ದೇವರು ಈ ಕಲ್ಪನೆ ಇರಬೇಕು ಎಂದು ಹೇಳಿದರು.

ಯುನೈಟೆಡ್ ಫ್ರೆಂಡ್ಸ್, ಮಾಲಾಡಿ ಅಧ್ಯಕ್ಷ ಮಹಮ್ಮದ್ ಆಲಿ ಮಾತನಾಡಿ ಕ್ರಿಸ್ಮಸ್ ಕೇವಲ ಕ್ರಿಸ್ತರ ಹಬ್ಬ ಅಲ್ಲ, ಎಲ್ಲರ ಹಬ್ಬ. ಇದೊಂದು ಸುಂದರವಾದ ಕಾರ್ಯಕ್ರಮ. ಲೋಕದಲ್ಲಿ ಶಾಂತಿ ಸೌಹಾರ್ದತೆ ಮಾತ್ರವಲ್ಲ ‘ಬಂಧುತ್ವ’ ಸಹ ಮುಖ್ಯವಾಗಿರಬೇಕು ಎಂದು ತಿಳಿಸಿದರು.


ಮೈಸೂರು ಜಿ. ಕೆ. ಟಯರ್ಸ್‌ನ ಮಾಜಿ ಮ್ಯಾನೇಜರ್ ಕ್ಲಿಫರ್ಡ್ ಜೇಮ್ಸ್ ಡಿಸೋಜಾ, ಕ. ಸಭಾ ಮಂಗ್ಳುರ್ ಪ್ರದೇಶ್ ಉಪಾಧ್ಯಕ್ಷ ಲಿಯೋ ರಾಡ್ರಿಗಸ್ ಶುಭ ಹಾರೈಸಿದರು. ಸರ್ವ ಧರ್ಮಿಯರಿಗೆ ಕ್ರಿಸ್ಮಸ್ ಉಡುಗೊರೆ ನೀಡಿ ಗೌರವಿಸಲಾಯ್ತು.
ವೇದಿಕೆಯಲ್ಲಿ ವಿನ್ಸೆಂಟ್ ಡಿಸೋಜಾ, ಜೆರಾಲ್ಡ್ ಮೊರಾಸ್, ಶ್ರೀಮತಿ ಸೆಲೆಸ್ತಿನ್ ಡಿಸೋಜಾ ಉಪಸ್ಥಿತರಿದ್ದರು. ವಿನ್ಸೆಂಟ್ ಡಿಸೋಜಾ ಸ್ವಾಗತಿಸಿದರು, ರಿಚಾರ್ಡ್ ಮೊರಾಸ್ ವಂದಿಸಿದರು. ವಿನ್ಸೆಂಟ್ ಮೊರಾಸ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya
error: Content is protected !!