22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪ್ರತಿಷ್ಠಿತ ಘಟಕಗಳಲ್ಲೊಂದಾದ ಯುವವಾಹಿನಿ ಉಪ್ಪಿನಂಗಡಿ ಘಟಕದ 2025-26 ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಾರ್ಯ ನಿವಾಸಿ ಮನೋಜ್ ಎನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.


ಇವರು ಬೆಂಗಳೂರಿನಲ್ಲಿ ತೈವಾನ್ ಮೂಲದ ಎಮ್.ಎನ್.ಸಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು, ಹಲವು ಸಂಘ, ಸಂಸ್ಥೆ,ಹಾಗೂ ಕೆಲವೊಂದು ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುವವಾಹಿನಿ(ರಿ.) ಕೇಂದ್ರ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿ, ವಿಶು ಕುಮಾರ್ ದತ್ತಿ ನಿಧಿಯ ಕೋಶಾಧಿಕಾರಿಯಾಗಿ, ವಿದ್ಯಾನಿಧಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರದ್ದು.

ವಿದ್ವತ್ ಪಿ.ಯು ಕಾಲೇಜ್ ಗುರುವಾಯನಕೆರೆಯಲ್ಲಿ ಉಪನ್ಯಾಸಕಿಯಾಗಿರುವ ಪತ್ನಿ ಶ್ರೀಮತಿ ದಿವ್ಯಶ್ರೀ ಮತ್ತು ಮಗಳು ಬೇಬಿ ಆರವಿ ಯೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.

Related posts

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!