37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ,ಜಿಲ್ಲಾ ಕಾರ್ಯವಾಹ ನವೀನ್ ಕೈಕಾರ ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು. ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ,ಉಜಿರೆ ತಾಲೂಕು ಸಂಪರ್ಕ ಪ್ರಮುಖ್ ಶಿವಪ್ರಸಾದ್ ಸುರ್ಯ ಉಪಸ್ಥಿತರಿದ್ದರು.ಪೂಜ್ಯ ಸ್ವಾಮೀಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯವಾಹ ಡಾ ಜಯಪ್ರಕಾಶ್ ಅವರಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಆಶೀರ್ವದಿಸಿದರು.

Related posts

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!