September 6, 2026
ಗ್ರಾಮಾಂತರ ಸುದ್ದಿವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ,ಜಿಲ್ಲಾ ಕಾರ್ಯವಾಹ ನವೀನ್ ಕೈಕಾರ ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು. ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ,ಉಜಿರೆ ತಾಲೂಕು ಸಂಪರ್ಕ ಪ್ರಮುಖ್ ಶಿವಪ್ರಸಾದ್ ಸುರ್ಯ ಉಪಸ್ಥಿತರಿದ್ದರು.ಪೂಜ್ಯ ಸ್ವಾಮೀಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯವಾಹ ಡಾ ಜಯಪ್ರಕಾಶ್ ಅವರಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಆಶೀರ್ವದಿಸಿದರು.

Related posts

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

Suddi Udaya

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!