23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!