22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

ಬೆಳ್ತಂಗಡಿ: ವಿಟ್ಲದಲ್ಲಿ ನಡೆದ ಜೆಸಿಐ ಭಾರತದ ವಲಯ 15 ರ ಪದಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಇದರ ಈ ವರ್ಷದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು 2026 ರ ವಲಯಾಧ್ಯಕ್ಷ ಇವರಿಂದ ಪ್ರಮಾಣಚನ ಸ್ವೀಕರಿಸಿದರು.

ಇವರು 2026 ನೇ ಸಾಲಿನ ವಲಯಾಡಳಿತ ಮಂಡಳಿಯ ತರಬೇತಿ ವಿಭಾಗದ ‘ಎಫೆಕ್ಟೀವ್ ಪಬ್ಲಿಕ್ ಸ್ಪೀಚ್, ಔಟ್‌ ಬಾಂಡಿಂಗ್ ಟ್ರೈನಿಂಗ್ ಪ್ರೋಗ್ರಾಂ, ಹಾಗೂ ಸ್ಪೀಚ್ ಕ್ರಾಫ್ಟ್’ ಇದರ ವಲಯ ಸಂಯೋಜಕರಾಗಿ ನಿಯೋಜನೆಗೊಂಡಿರುತ್ತಾರೆ. ಜೆಸಿಐ ಬೆಳ್ತಂಗಡಿಯ 48 ವರ್ಷ ಇತಿಹಾಸದಲ್ಲಿ ಪ್ರಥಮವಾಗಿ ಮಹಿಳಾ ಅಧ್ಯಕ್ಷರನ್ನು ಕಂಡ ಬೆಳ್ತಂಗಡಿ ಜೇಸಿ ಈ ವರ್ಷ ಜೇಸಿ ಆಶಾಲತಾ ಪ್ರಶಾಂತ್ ನಾಯಕತ್ವದಲ್ಲಿ ಜೇಸಿ ಸದಸ್ಯರಿಗೆ ಹಾಗೂ ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ಹಲವಾರು ವಿಭಾಗದಲ್ಲಿ ತರಬೇತಿ ಆಯೋಜಿಸಿರುತ್ತಾರೆ. ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವವದ ಮೂಲಕ ತಾಲೂಕಿನ ಯುವ ಪ್ರತಿಭೆಗಳಿಗೆ ವೇದಿಕೆ ಅವಕಾಶ ಹಾಗೂ ಸಾಧಕರಿಗೆ ಸಾಧನ ಶ್ರೀ ಪ್ರಶಸ್ತಿ ಮುಂತಾದ ಕಾರ್ಯಕ್ರಮ ನಡೆಸಿ ಯಶಸ್ವಿ ಅಧ್ಯಕ್ಷರಾಗಿ ಹೊರಹೊಮ್ಮಿದವರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!