September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರ ನಿವಾಸಿ ಬಾಲಕೃಷ್ಣ ರಾವ್ ಎಂಬವರಿಗೆ 2001 ಫೆಬ್ರವರಿಯಲ್ಲಿ ಎಲ್.ಪಿ.ಸಿ ವಾರಂಟ್ ಹೊರಡಿಸಲಾಗಿತ್ತು. ಅವರ ಪತ್ತೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರಾದ ರೋಹಿಣಿ, ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್, ಉಪ ನೀರಿಕ್ಷಕರಾದ ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್‌ರಾಜ್, ರವರು ಉಡುಪಿ, ಪುತ್ತೂರು, ಚಿಕ್ಕಮಗಳೂರು ಅಂಚೆ ಉಪ ವಿಭಾಗಗಳಿಗೆ ಭೇಟಿ ನೀಡಿ ಅವರ ಬಗ್ಗೆ ವಿಚಾರಿಸಿದಾಗ, ೧೯೯೭ ರಲ್ಲಿ ಚಿಕ್ಕಮಗಳೂರು ಅಂಚೆ ವಿಭಾಗದಿಂದ ಕಡ್ಡಾಯ ನಿವೃತ್ತಿ ನೀಡಿದ್ದು, ೨೦೦೭ ಫೆ. ೧೨ ರಲ್ಲಿ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಅದರಂತೆ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಪಡೆದು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya
error: Content is protected !!