37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.


ಶಿಕ್ಷಕಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!