July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.


ಶಿಕ್ಷಕಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!