September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.


ಶಿಕ್ಷಕಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪೆರಿಂಜೆ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ: ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya
error: Content is protected !!