July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ : ಪಡಂದಡ್ಕ ವ್ಯಾಪ್ತಿಯ ಕಿರೋಡಿಯಿಂದ ಕಟ್ಟೆ ಬಳಿವರೆಗೆ ಇರುವ ರಸ್ತೆ ಸಂಪೂರ್ಣ ಹೊಂಡಗಳಿಂದ ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗಿದ್ದು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೈಗೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬೆಳ್ತಂಗಡಿ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷರು ಸಲ್ಮಾನ್ ಪಡ್ಡಂದಡ್ಕ, ಕೋಶಾಧಿಕಾರಿ ಇಮ್ತಿಯಾಜ್ ಹಾಗೂ ವೇಣೂರು ಬ್ಲಾಕ್ ಸಮಿತಿ ಸದಸ್ಯ ಜುನೈದ್ ಉಪಸ್ಥಿತರಿದ್ದರು.

Related posts

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!