September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪ್ರತಿಷ್ಠಿತ ಘಟಕಗಳಲ್ಲೊಂದಾದ ಯುವವಾಹಿನಿ ಉಪ್ಪಿನಂಗಡಿ ಘಟಕದ 2025-26 ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಾರ್ಯ ನಿವಾಸಿ ಮನೋಜ್ ಎನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.


ಇವರು ಬೆಂಗಳೂರಿನಲ್ಲಿ ತೈವಾನ್ ಮೂಲದ ಎಮ್.ಎನ್.ಸಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು, ಹಲವು ಸಂಘ, ಸಂಸ್ಥೆ,ಹಾಗೂ ಕೆಲವೊಂದು ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುವವಾಹಿನಿ(ರಿ.) ಕೇಂದ್ರ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿ, ವಿಶು ಕುಮಾರ್ ದತ್ತಿ ನಿಧಿಯ ಕೋಶಾಧಿಕಾರಿಯಾಗಿ, ವಿದ್ಯಾನಿಧಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರದ್ದು.

ವಿದ್ವತ್ ಪಿ.ಯು ಕಾಲೇಜ್ ಗುರುವಾಯನಕೆರೆಯಲ್ಲಿ ಉಪನ್ಯಾಸಕಿಯಾಗಿರುವ ಪತ್ನಿ ಶ್ರೀಮತಿ ದಿವ್ಯಶ್ರೀ ಮತ್ತು ಮಗಳು ಬೇಬಿ ಆರವಿ ಯೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
error: Content is protected !!