30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ, ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು.

ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆ ಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ ಮತ್ತು ಮಂಡಲ ಕಾರ್ಯವಾಹ ಸತ್ಯಪ್ರಸಾದ್ ಕಲ್ಮಂಜ ಉಪಸ್ಥಿತರಿದ್ದರು.

Related posts

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
error: Content is protected !!