September 6, 2026
ಗ್ರಾಮಾಂತರ ಸುದ್ದಿವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ,ಜಿಲ್ಲಾ ಕಾರ್ಯವಾಹ ನವೀನ್ ಕೈಕಾರ ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು. ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ,ಉಜಿರೆ ತಾಲೂಕು ಸಂಪರ್ಕ ಪ್ರಮುಖ್ ಶಿವಪ್ರಸಾದ್ ಸುರ್ಯ ಉಪಸ್ಥಿತರಿದ್ದರು.ಪೂಜ್ಯ ಸ್ವಾಮೀಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯವಾಹ ಡಾ ಜಯಪ್ರಕಾಶ್ ಅವರಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಆಶೀರ್ವದಿಸಿದರು.

Related posts

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya
error: Content is protected !!