22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಬೆಳ್ತಂಗಡಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ. ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು ಸಂಕಷ್ಟದಲ್ಲಿದ್ದಾರೆ.

ನಮ್ಮ ಸಂಘದ ವ್ಯಾಪ್ತಿಯ ಕರಾಯ, ಹಾಗೂ ತಣ್ಣೀರುಪoತ ಗ್ರಾಮದ ರೈತರಿಗೆ ಈ ವರ್ಷ ಕಳೆದ ವರ್ಷಗಳಿಗಿಂತಲೂ ತುಂಬಾ ಕಡಿಮೆ ಮೊತ್ತ ರೈತರಿಗೆ ಜಮಾವಣೆಯಾಗಿದ್ದು, ಈ ಬಗ್ಗೆ ಡಿಸೆಂಬರ್ 12 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದು ಈ ಬಗ್ಗೆ ಎಲ್ಲಾ ಸಹಕಾರಿ ಸಂಘಗಳೂ ಕೂಡ ಕಾನೂನು ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ತಾರತಮ್ಯ ನೀತಿಯಿಂದ ಬಯಲು ಸೀಮೆಯ ರೈತರಂತೆ ನಮ್ಮ ಜಿಲ್ಲೆಯ ರೈತರು ತುಂಬಾ ಶೋಚನಿಯ ಪರಿಸ್ಥಿತಿ ಜೀವನ ನಡೆಸಬಹುದು. ಈ ಬಗ್ಗೆ ಸರ್ಕಾರ ಎಚ್ಚೆತ್ತುಗೊಂಡು ಸಮಸ್ಯೆ ಪರಿಹರಿಸದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಿದ್ದರಾಗಿದ್ದೇವೆoದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!