23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಬೆಳ್ತಂಗಡಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ. ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು ಸಂಕಷ್ಟದಲ್ಲಿದ್ದಾರೆ.

ನಮ್ಮ ಸಂಘದ ವ್ಯಾಪ್ತಿಯ ಕರಾಯ, ಹಾಗೂ ತಣ್ಣೀರುಪoತ ಗ್ರಾಮದ ರೈತರಿಗೆ ಈ ವರ್ಷ ಕಳೆದ ವರ್ಷಗಳಿಗಿಂತಲೂ ತುಂಬಾ ಕಡಿಮೆ ಮೊತ್ತ ರೈತರಿಗೆ ಜಮಾವಣೆಯಾಗಿದ್ದು, ಈ ಬಗ್ಗೆ ಡಿಸೆಂಬರ್ 12 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದು ಈ ಬಗ್ಗೆ ಎಲ್ಲಾ ಸಹಕಾರಿ ಸಂಘಗಳೂ ಕೂಡ ಕಾನೂನು ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ತಾರತಮ್ಯ ನೀತಿಯಿಂದ ಬಯಲು ಸೀಮೆಯ ರೈತರಂತೆ ನಮ್ಮ ಜಿಲ್ಲೆಯ ರೈತರು ತುಂಬಾ ಶೋಚನಿಯ ಪರಿಸ್ಥಿತಿ ಜೀವನ ನಡೆಸಬಹುದು. ಈ ಬಗ್ಗೆ ಸರ್ಕಾರ ಎಚ್ಚೆತ್ತುಗೊಂಡು ಸಮಸ್ಯೆ ಪರಿಹರಿಸದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಿದ್ದರಾಗಿದ್ದೇವೆoದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ತಿಳಿಸಿದ್ದಾರೆ.

Related posts

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
error: Content is protected !!