22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

ಬೆಳ್ತಂಗಡಿ: ಅಡಿಕೆ ಮತ್ತು ಕಾಳುಮೆಣಸಿಗೆ ಬೆಳೆ ವಿಮೆ ಪರಿಹಾರ ಕಡಿಮೆ ಮೊತ್ತ ಪಾವತಿಯಾಗುತ್ತಿದ್ದು, ಬೆಳೆಗಾರರನ್ನು ಕಂಗಲಾಗಿಸಿದೆ. ಎರಡು ವರ್ಷ ಅತೀ ಹೆಚ್ಚು ಮಳೆಯಿಂದ ಬೆಳೆ ಹಾನಿಯಾಗಿದ್ದರೂ ಕಡಿಮೆ ಪರಿಹಾರ ನೀಡುತ್ತಿರುವುದು ರೈತರಲ್ಲಿ ಗೊಂದಲ ಉಂಟು ಮಾಡಿದೆ. ನಮ್ಮ ಬಂಗಾಡಿ ಆಸುಪಾಸಿನಲ್ಲಿ 90% ಬೆಳೆವಿಮೆ ಬಾರದೆ ರೈತರು ತೊಂದರೆಯಾಗಿದೆ. ಕೂಡಲೇ ಸರಕಾರ ಬೆಳೆವಿಮೆ ರೈತರಿಗೆ ನೀಡಬೇಕು ಎಂದು ಬಂಗಾಡಿ ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರುವುದಿಲ್ಲ.ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮದ ರೈತ ಸದಸ್ಯರಿಗೆ ಬೆಳೆವಿಮೆ ಬಂದರೂ ತಾರತಮ್ಯ ಮಾಡಲಾಗಿದೆ. ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ತಿಳಿಸಿದ್ದಾರೆ.

Related posts

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!