September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

ಬೆಳ್ತಂಗಡಿ: ಅಡಿಕೆ ಮತ್ತು ಕಾಳುಮೆಣಸಿಗೆ ಬೆಳೆ ವಿಮೆ ಪರಿಹಾರ ಕಡಿಮೆ ಮೊತ್ತ ಪಾವತಿಯಾಗುತ್ತಿದ್ದು, ಬೆಳೆಗಾರರನ್ನು ಕಂಗಲಾಗಿಸಿದೆ. ಎರಡು ವರ್ಷ ಅತೀ ಹೆಚ್ಚು ಮಳೆಯಿಂದ ಬೆಳೆ ಹಾನಿಯಾಗಿದ್ದರೂ ಕಡಿಮೆ ಪರಿಹಾರ ನೀಡುತ್ತಿರುವುದು ರೈತರಲ್ಲಿ ಗೊಂದಲ ಉಂಟು ಮಾಡಿದೆ. ನಮ್ಮ ಬಂಗಾಡಿ ಆಸುಪಾಸಿನಲ್ಲಿ 90% ಬೆಳೆವಿಮೆ ಬಾರದೆ ರೈತರು ತೊಂದರೆಯಾಗಿದೆ. ಕೂಡಲೇ ಸರಕಾರ ಬೆಳೆವಿಮೆ ರೈತರಿಗೆ ನೀಡಬೇಕು ಎಂದು ಬಂಗಾಡಿ ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರುವುದಿಲ್ಲ.ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮದ ರೈತ ಸದಸ್ಯರಿಗೆ ಬೆಳೆವಿಮೆ ಬಂದರೂ ತಾರತಮ್ಯ ಮಾಡಲಾಗಿದೆ. ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!