25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

ಬೆಳ್ತಂಗಡಿ: ಅಡಿಕೆ ಮತ್ತು ಕಾಳುಮೆಣಸಿಗೆ ಬೆಳೆ ವಿಮೆ ಪರಿಹಾರ ಕಡಿಮೆ ಮೊತ್ತ ಪಾವತಿಯಾಗುತ್ತಿದ್ದು, ಬೆಳೆಗಾರರನ್ನು ಕಂಗಲಾಗಿಸಿದೆ. ಎರಡು ವರ್ಷ ಅತೀ ಹೆಚ್ಚು ಮಳೆಯಿಂದ ಬೆಳೆ ಹಾನಿಯಾಗಿದ್ದರೂ ಕಡಿಮೆ ಪರಿಹಾರ ನೀಡುತ್ತಿರುವುದು ರೈತರಲ್ಲಿ ಗೊಂದಲ ಉಂಟು ಮಾಡಿದೆ. ನಮ್ಮ ಬಂಗಾಡಿ ಆಸುಪಾಸಿನಲ್ಲಿ 90% ಬೆಳೆವಿಮೆ ಬಾರದೆ ರೈತರು ತೊಂದರೆಯಾಗಿದೆ. ಕೂಡಲೇ ಸರಕಾರ ಬೆಳೆವಿಮೆ ರೈತರಿಗೆ ನೀಡಬೇಕು ಎಂದು ಬಂಗಾಡಿ ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರುವುದಿಲ್ಲ.ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮದ ರೈತ ಸದಸ್ಯರಿಗೆ ಬೆಳೆವಿಮೆ ಬಂದರೂ ತಾರತಮ್ಯ ಮಾಡಲಾಗಿದೆ. ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ತಿಳಿಸಿದ್ದಾರೆ.

Related posts

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya
error: Content is protected !!