25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

ಬೆಳ್ತಂಗಡಿ: ಅಡಿಕೆ ಮತ್ತು ಕಾಳುಮೆಣಸಿಗೆ ಬೆಳೆ ವಿಮೆ ಪರಿಹಾರ ಕಡಿಮೆ ಮೊತ್ತ ಪಾವತಿಯಾಗುತ್ತಿದ್ದು, ಬೆಳೆಗಾರರನ್ನು ಕಂಗಲಾಗಿಸಿದೆ. ಎರಡು ವರ್ಷ ಅತೀ ಹೆಚ್ಚು ಮಳೆಯಿಂದ ಬೆಳೆ ಹಾನಿಯಾಗಿದ್ದರೂ ಕಡಿಮೆ ಪರಿಹಾರ ನೀಡುತ್ತಿರುವುದು ರೈತರಲ್ಲಿ ಗೊಂದಲ ಉಂಟು ಮಾಡಿದೆ. ನಮ್ಮ ಬಂಗಾಡಿ ಆಸುಪಾಸಿನಲ್ಲಿ 90% ಬೆಳೆವಿಮೆ ಬಾರದೆ ರೈತರು ತೊಂದರೆಯಾಗಿದೆ. ಕೂಡಲೇ ಸರಕಾರ ಬೆಳೆವಿಮೆ ರೈತರಿಗೆ ನೀಡಬೇಕು ಎಂದು ಬಂಗಾಡಿ ಸೊಸೈಟಿ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರುವುದಿಲ್ಲ.ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮದ ರೈತ ಸದಸ್ಯರಿಗೆ ಬೆಳೆವಿಮೆ ಬಂದರೂ ತಾರತಮ್ಯ ಮಾಡಲಾಗಿದೆ. ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya
error: Content is protected !!