March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಬೆಳ್ತಂಗಡಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ. ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು ಸಂಕಷ್ಟದಲ್ಲಿದ್ದಾರೆ.

ನಮ್ಮ ಸಂಘದ ವ್ಯಾಪ್ತಿಯ ಕರಾಯ, ಹಾಗೂ ತಣ್ಣೀರುಪoತ ಗ್ರಾಮದ ರೈತರಿಗೆ ಈ ವರ್ಷ ಕಳೆದ ವರ್ಷಗಳಿಗಿಂತಲೂ ತುಂಬಾ ಕಡಿಮೆ ಮೊತ್ತ ರೈತರಿಗೆ ಜಮಾವಣೆಯಾಗಿದ್ದು, ಈ ಬಗ್ಗೆ ಡಿಸೆಂಬರ್ 12 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದು ಈ ಬಗ್ಗೆ ಎಲ್ಲಾ ಸಹಕಾರಿ ಸಂಘಗಳೂ ಕೂಡ ಕಾನೂನು ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ತಾರತಮ್ಯ ನೀತಿಯಿಂದ ಬಯಲು ಸೀಮೆಯ ರೈತರಂತೆ ನಮ್ಮ ಜಿಲ್ಲೆಯ ರೈತರು ತುಂಬಾ ಶೋಚನಿಯ ಪರಿಸ್ಥಿತಿ ಜೀವನ ನಡೆಸಬಹುದು. ಈ ಬಗ್ಗೆ ಸರ್ಕಾರ ಎಚ್ಚೆತ್ತುಗೊಂಡು ಸಮಸ್ಯೆ ಪರಿಹರಿಸದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಿದ್ದರಾಗಿದ್ದೇವೆoದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ತಿಳಿಸಿದ್ದಾರೆ.

Related posts

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!