22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಬೆಳ್ತಂಗಡಿ: ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ. ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು ಸಂಕಷ್ಟದಲ್ಲಿದ್ದಾರೆ.

ನಮ್ಮ ಸಂಘದ ವ್ಯಾಪ್ತಿಯ ಕರಾಯ, ಹಾಗೂ ತಣ್ಣೀರುಪoತ ಗ್ರಾಮದ ರೈತರಿಗೆ ಈ ವರ್ಷ ಕಳೆದ ವರ್ಷಗಳಿಗಿಂತಲೂ ತುಂಬಾ ಕಡಿಮೆ ಮೊತ್ತ ರೈತರಿಗೆ ಜಮಾವಣೆಯಾಗಿದ್ದು, ಈ ಬಗ್ಗೆ ಡಿಸೆಂಬರ್ 12 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದು ಈ ಬಗ್ಗೆ ಎಲ್ಲಾ ಸಹಕಾರಿ ಸಂಘಗಳೂ ಕೂಡ ಕಾನೂನು ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ತಾರತಮ್ಯ ನೀತಿಯಿಂದ ಬಯಲು ಸೀಮೆಯ ರೈತರಂತೆ ನಮ್ಮ ಜಿಲ್ಲೆಯ ರೈತರು ತುಂಬಾ ಶೋಚನಿಯ ಪರಿಸ್ಥಿತಿ ಜೀವನ ನಡೆಸಬಹುದು. ಈ ಬಗ್ಗೆ ಸರ್ಕಾರ ಎಚ್ಚೆತ್ತುಗೊಂಡು ಸಮಸ್ಯೆ ಪರಿಹರಿಸದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಿದ್ದರಾಗಿದ್ದೇವೆoದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya
error: Content is protected !!