23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಡಿ.28 ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19 ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ ಆಯ್ಕೆಯಾಗಿದ್ದಾರೆ.

ಯಕ್ಷಗಾನ ಕಲಾ ಸಂಘಟನೆ, ಸಾಂಸ್ಕೃತಿಕ, ಸಾಮಾಜಿಕ, ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಭುಜಬಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಸಮ್ಮೇಳನ ಸಂಯೋಜನಾ ಸಮಿತಿ ಮುಖ್ಯಸ್ಥರ ಸಮ್ಮುಖ ಡಿ.16 ರಂದು ನಡೆದ ಸಮಾಲೋಚನೆಯ ಬಳಿಕ ಕಸಾಪ ತಾ. ಅಧ್ಯಕ್ಷ ಡಿ ಯದುಪತಿ ಗೌಡ ಸಮ್ಮೇಳನಾಧ್ಯಕ್ಷರ ಹೆಸರು ಘೋಷಿಸಿದರು.


ಬಂಗ್ವಾಡಿಯ ಬಿ ಪದ್ಮನಾಭ ಶೆಟ್ಟಿ ಮತ್ತು ಅನಂತಮತಿ ದಂಪತಿಯ ಪುತ್ರನಾಗಿ ಜನಿಸಿದ ಭುಜಬಲಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಾರುಪತ್ಯಗಾರ, ಜಮಾ ಉಗ್ರಾಣದಲ್ಲಿ ಮುತ್ಸದ್ಧಿಯಾಗಿ ವಿವಿಧ ಸ್ಥರಗಳಲ್ಲಿ ೪೮ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಲಾಪ್ರೇಮಿಗಳಾಗಿ ಕಲಾವಿದರನ್ನು ಸಂಘಟಿಸಿ ಯಕ್ಷಗಾನ ಪ್ರಸಂಗ, ಜಿನಕಥೆ, ಹರಿಕಥೆ, ತಾಳಮದ್ದಳೆ, ಭಕ್ತಿಗೀತೆಗಳು, ಪ್ರವಚನ, ಕಾವ್ಯ ವಾಚನ, ರಾಮಾಯಣ, ಮಹಾಭಾರತ, ಜೈನ ಧರ್ಮ ಮತ್ತು ಇತರ ಧರ್ಮಗಳ ಕುರಿತು ಹತ್ತು ಹಲವು ವಿವಿಧ ಮಾಧ್ಯಮ ಧ್ವನಿ ಮುದ್ರಿಕೆಗಳ ಮೂಲಕ 100ಕ್ಕೂ ಹೆಚ್ಚು ಧ್ವನಿ ಸುರುಳಿಗಳನ್ನು ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ. ಅನೇಕ ಧಾರ್ಮಿಕ ಪ್ರಕಟಣೆ ಮೂಲಕ ಕೀರ್ತಿ ಹೊತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಗಳ ಸ್ವಾಗತ ಸಮಿತಿಯ ಸದಸ್ಯರಾಗಿ, 2009 ರಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ‘ತುಳುಗ್ರಾಮ’ದ ನಿರ್ವಹಣೆಯಲ್ಲಿ ಉತ್ತಮ ತಂಡದೊಂದಿಗೆ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಭಗವಾನ್ ಶ್ರೀ ಬಹುಬಲಿ ಮಹಾಮಸ್ತಕಾಭಿಷೇಕ, ಪಂಚಕಲ್ಯಾಣ, ಸಮವಸರಣ ಪೂಜೆ, ಮಹಾ ಧರ್ಮನಡಾವಳಿ, ಧಾಮ ಸಂಪ್ರೋಕ್ಷಣೆ, ಮಂಜುನಾಥ ಸ್ವಾಮಿಯ ಬ್ರಹ್ಮಕಲಶೋತ್ಸವ ಇತ್ಯಾದಿಗಳಲ್ಲಿ ಸಮಗ್ರವಾಗಿ ತೊಡಗಿಸಿಕೊಂಡು ಅನುಭವ ಪ್ರಾಪ್ತಿಸಿಕೊಂಡಿದ್ದಾರೆ.

ಸಮೂಹ ಉಜಿರೆ ಸಾಂಸ್ಕೃತಿಕ ಸಂಘಟನೆ ಹಾಗೂ ‘ಕಲಾಬಳಗ ರಂಗಶಿವ’ ಇದರ ಸದಸ್ಯರಾಗಿ ಸೇವೆ ನೀಡುತ್ತಿದ್ದಾರೆ. ಸಹಕಾರಿ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಭಾರತೀಯ ಜೈನ್‌ಮಿಲನ್ ಅಧ್ಯಕ್ಷರಾಗಿ, ಕಸಾಪ ರಾಜ್ಯ ಸಮಿತಿ ಆಜೀವ ಸದಸ್ಯರಾಗಿ, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (ಅಲ್ಪ ಸಂಖ್ಯಾತ ಆಯೋಗ) ಅನುಷ್ಠಾನ ಜಿಲ್ಲಾ ಸ್ಥಾಯಿ ಸಮಿತಿಯ ನಾಮನಿರ್ದೇಶನ ಸದಸ್ಯರಾಗಿ, ಅಂತಾರಾಷ್ಟಿçÃಯ ಸೇವಾ ಸಂಸ್ಥೆಗಳಾದ ಜೆಸಿ, ರೋಟರಿ ಮತ್ತು ಲಯನ್ಸ್ ಕ್ಲಬ್‌ಗಳ ಮೂಲಕವೂ ಅನೇಕ ಜನಪರ ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಯಾಗಿಯೂ ಪಾಲ್ಗೊಳ್ಳುವಿಕೆಯ ಮೂಲಕ ಸಂಸ್ಕೃತಿ ಮತ್ತು ಸಾಹಿತ್ಯ ಪೂರಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಯಕ್ಷಗಾನ ಕಲಾ ಸಂಘಟಕರಿಗೆ ಹಾಗೂ ಕಲಾವಿದರಿಂದ ನೆರವು ಹಾಗೂ ಪ್ರೋತ್ಸಾಹ ನೀಡುತ್ತಾ ಕಲಾ ಆಶ್ರಯದಾತರೂ ಆಗಿದ್ದಾರೆ.


ಇವರ ಬಹುವಿಧ ಕಲೆ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಮಂಜುಶ್ರೀ ಯುವಕ ಮಂಡಲ ಅಂತಾರಾಷ್ಟಿçÃಯ ಕಾಮನ್‌ವೆಲ್ತ್ ಪ್ರಶಸ್ತಿ (ಲಂಡನ್ ಕೇಂದ್ರಿತ), ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಸಾಧನಾ ರಾಷ್ಟಿçÃಯ ಸಾಂಸ್ಕೃತಿಕ ಪ್ರತಿಷ್ಠಾನ ಇದರ ರಾಜ್ಯಮಟ್ಟದ ಸಾಧನಾ ಪ್ರಶಸ್ತಿ, ಕರ್ನಾಟಕ ಜ್ಯೋತಿ ರಾಜ್ಯೋತ್ಸವ ಪ್ರಶಸ್ತಿ, ಕಲ್ಪತರು ರಾಜ್ಯ ಪ್ರಶಸ್ತಿ, ರಾಷ್ಟಿçÃಯ ಸಹಕಾರ ಮಹಾಮಂಡಲದಿಂದ ಪ್ರತಿಷ್ಠಿತ ‘ಸುಭಾಸ್ ಯಾದವ್ ರಾಷ್ಟ್ರ ಪ್ರಶಸ್ತಿ’, ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿ, ರಂಗ ಸ್ವರೂಪ ಟ್ರಸ್ಟ್ ಸಾಗರ ಭಾವೈಖ್ಯತಾ ಪ್ರಶಸ್ತಿ, ಧರ್ಮಸ್ಥಳ ಕ್ಷೇತ್ರದಿಂದ ಸೇವಾ ತತ್ಪರ ಪ್ರಶಸ್ತಿ ಸೇರಿದಂತೆ ನಾಡಿನ ಅನೇಕ ಕಡೆ ಸನ್ಮಾನ, ಪುರಸ್ಕಾರ, ಮನ್ನಣೆಗಳು ಅವರಿಗೆ ಲಭಿಸಿವೆ.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!