37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು 16-12-2025 ರಿಂದ 16-09-2026 ರವರೆಗೆ ಗಡಿಪಾರು (10 ತಿಂಗಳು) ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಎರಡನೇ ಭಾರಿಗೆ ಹೈಕೋರ್ಟ್ ಆದೇಶದಂತೆ ಮೊದಲ ಗಡಿಪಾರು ಆದೇಶವನ್ನು ಮರು ಪರಿಶೀಲನೆ ಮಾಡಿ ಮತ್ತೆ ಡಿ.16 ರಂದು ಗಡಿಪಾರು ಮಾಡಿ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಆದೇಶ ಮಾಡಿದ್ದರು.

ಈ ಆದೇಶದ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಗಡಿಪಾರು ಆದೇಶದ ಪ್ರತಿ ಜಾರಿ ಮಾಡಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಲು ಡಿ.18 ರಂದು ಬೆಳಗ್ಗೆ ತೆರಳಿದಾಗ ಪೊಲೀಸರು ಬರುವ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಇರಲಿಲ್ಲ ಎನ್ನಲಾಗಿದೆ. ಗಡಿಪಾರು ಆದೇಶವಾಗಿ ಮಹೇಶ್ ಶೆಟ್ಟಿ ತಿಮರೋಡಿ ಬಗ್ಗೆ ಬೆಳ್ತಂಗಡಿ ಪೊಲೀಸರು ಡಿ.18 ರಂದು ಸಂಜೆ ಉಜಿರೆ ಪೇಟೆಯಲ್ಲಿ ಸಾರ್ವಜನಿಕ ಪ್ರಕಟಣೆಯನ್ನು ಮೈಕ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ.

Related posts

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!