ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

ಕರಾಯ: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಡಿ.20 ರಂದು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆ, ಕರಾಯದಲ್ಲಿ ನಡೆಯಲಿದೆ.

ಬೆಳಿಗ್ಗೆ ನೋಂದಣಿ, ಉಪಹಾರ, ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ, ಹೈನುಗಾರಿಕೆ ಮಾಹಿತಿ, ಕರುಗಳ ಮೌಲ್ಯಮಾಪನ, ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಜೆರ್ಸಿ, ಹೆಚ್.ಎಫ್., ಇತರ ತಳಿಗಳು ಮತ್ತು ಎಮ್ಮೆ ಕರುಗಳ ವಿಭಾಗಗಳಲ್ಲಿ ಮತ್ತು 0-4, 5-8 ಹಾಗೂ 9-12 ತಿಂಗಳ ವಯೋ ಗುಂಪುಗಳಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ.

ಒಕ್ಕೂಟದ ಪಶುವೈದ್ಯರು ಪ್ರದರ್ಶನದಲ್ಲಿ ಭಾಗವಹಿಸಲಿರುವ ಕರುಗಳ ಆಯ್ಕೆ ಮತ್ತು ನೋಂದಣಿಯನ್ನು ಮುಂಚಿತವಾಗಿಯೇ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ. ಹಾಲು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, (ಪ.ಸಂ.) ಕ.ಹಾ.ಮ. ಬೆಂಗಳೂರು ನಿರ್ದೇಶಕ ಡಾ. ಬಸವರಾಜ್, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ದ.ಕ ಒಕ್ಕೂಟದ ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!