23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

ಕರಾಯ: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಡಿ.20 ರಂದು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆ, ಕರಾಯದಲ್ಲಿ ನಡೆಯಲಿದೆ.

ಬೆಳಿಗ್ಗೆ ನೋಂದಣಿ, ಉಪಹಾರ, ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ, ಹೈನುಗಾರಿಕೆ ಮಾಹಿತಿ, ಕರುಗಳ ಮೌಲ್ಯಮಾಪನ, ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಜೆರ್ಸಿ, ಹೆಚ್.ಎಫ್., ಇತರ ತಳಿಗಳು ಮತ್ತು ಎಮ್ಮೆ ಕರುಗಳ ವಿಭಾಗಗಳಲ್ಲಿ ಮತ್ತು 0-4, 5-8 ಹಾಗೂ 9-12 ತಿಂಗಳ ವಯೋ ಗುಂಪುಗಳಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ.

ಒಕ್ಕೂಟದ ಪಶುವೈದ್ಯರು ಪ್ರದರ್ಶನದಲ್ಲಿ ಭಾಗವಹಿಸಲಿರುವ ಕರುಗಳ ಆಯ್ಕೆ ಮತ್ತು ನೋಂದಣಿಯನ್ನು ಮುಂಚಿತವಾಗಿಯೇ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ. ಹಾಲು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, (ಪ.ಸಂ.) ಕ.ಹಾ.ಮ. ಬೆಂಗಳೂರು ನಿರ್ದೇಶಕ ಡಾ. ಬಸವರಾಜ್, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ದ.ಕ ಒಕ್ಕೂಟದ ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ.

Related posts

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya
error: Content is protected !!