23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ನಾರಾವಿ ಹಾಲು ಉತ್ಪಾದಕರ ಸಹಕಾರಿ ಸಂಘ, ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘ, ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಜಂಟಿ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ. 21 ರಂದು ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿರುವುದು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸುವರು. ನಾರಾವಿ ಪ್ಯಾಕ್ಸ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಅಧ್ಯಕ್ಷತೆ ವಹಿಸುವರು. ನಾರಾವಿ ಗ್ರಾ.ಪಂ.ಅಧ್ಯಕ್ಷ ರಾಜವರ್ಮ ಜೈನ್, ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಅರಿವಳಿಕೆ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ. ಮೆಹೆಂದಳೆ, ಹೊಸ್ಮಾರು ವಿಜಯಾ ಪಾಲಿಕ್ಲಿನಿಕ್ ಡಾ| ಪ್ರಸಾದ್ ಬಿ. ಶೆಟ್ಟಿ, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ ನಾರಾವಿ ಭಾಗವಹಿಸಲಿದ್ದಾರೆ.

Related posts

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!