25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸ್ಪರ್ಧೆ ಡಿ,. 18ರಿಂದ 22ರವರೆಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ಹಾಗೂ ಯೋಗ ವಿಭಾಗದ ಡೀನ್ ಮತ್ತು ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.

ತಂಡದ ತರಬೇತುದಾರರಾಗಿ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಹಾಗೂ ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಕುಮಾರ್ ಭಾಗವಹಿಸುತ್ತಿದ್ದಾರೆ.

ಸ್ಪರ್ಧೆಯಲ್ಲಿ ಎಸ್‌ಡಿಎಂ ಬಿಎನ್‌ವೈಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಡಾ. ಸ್ವಪ್ನಿಲ್, ಡಾ. ವಿಶ್ವಾಸ್, ಅಕ್ಷಯ್ ಕುಮಾರ್, ಮಾರ್ಕನ್, ಸ್ವರೂಪ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

ಇದಲ್ಲದೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯ, ಬೆಂಗಳೂರು ಇದರ ಉಪಕುಲಪತಿಗಳಾದ ಡಾ. ಭಗವಾನ್ ಅವರು ರಾಷ್ಟ್ರೀಯ ಯೋಗ ತಂಡವನ್ನು ಸನ್ಮಾನಿಸಿದರು.

Related posts

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!