July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸ್ಪರ್ಧೆ ಡಿ,. 18ರಿಂದ 22ರವರೆಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ಹಾಗೂ ಯೋಗ ವಿಭಾಗದ ಡೀನ್ ಮತ್ತು ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.

ತಂಡದ ತರಬೇತುದಾರರಾಗಿ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಹಾಗೂ ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಕುಮಾರ್ ಭಾಗವಹಿಸುತ್ತಿದ್ದಾರೆ.

ಸ್ಪರ್ಧೆಯಲ್ಲಿ ಎಸ್‌ಡಿಎಂ ಬಿಎನ್‌ವೈಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಡಾ. ಸ್ವಪ್ನಿಲ್, ಡಾ. ವಿಶ್ವಾಸ್, ಅಕ್ಷಯ್ ಕುಮಾರ್, ಮಾರ್ಕನ್, ಸ್ವರೂಪ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

ಇದಲ್ಲದೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯ, ಬೆಂಗಳೂರು ಇದರ ಉಪಕುಲಪತಿಗಳಾದ ಡಾ. ಭಗವಾನ್ ಅವರು ರಾಷ್ಟ್ರೀಯ ಯೋಗ ತಂಡವನ್ನು ಸನ್ಮಾನಿಸಿದರು.

Related posts

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!