July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ (ಸಿಪಿಆರ್) ಕುರಿತ ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ ಡಿ.17 ರಂದು ನಡೆಯಿತು.

ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಹಿರಿಯ ವೈದ್ಯ ವಿದ್ಯಾರ್ಥಿ ಡಾ. ಸಾತ್ವಿಕ್ ಜಲಿಹಾಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಥಮ ಚಿಕಿತ್ಸೆಯ ಪ್ರಯೋಜನ, ಅಗತ್ಯ ಹಾಗೂ ನಾಯಿ, ಬೆಕ್ಕು, ಹಾವು ಮತ್ತಿತರ ಪ್ರಾಣಿಗಳು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ವಿವರಿಸಿದರು.

ಇನ್ನೋರ್ವ ಹಿರಿಯ ವೈದ್ಯ ವಿದ್ಯಾರ್ಥಿ ಡಾ. ವಿನೋಲಾ ಪಿಂಟೊ ಪ್ರಾಯೋಗಿಕವಾಗಿ ಪ್ರಥಮ ಚಿಕಿತ್ಸೆಯ ವಿಧಾನವನ್ನು ತೋರಿಸಿಕೊಟ್ಟರು. ಕಾರ್ಡಿಯೋ ಪಲ್ಮನರಿ ರಿಸಸ್ಸಿಟೇಶನ್ (ಸಿಪಿಆರ್) ಪ್ರಥಮ ಚಿಕಿತ್ಸೆಯ ಪ್ರಾತ್ಯಕ್ಷಿಕೆ ನಡೆಯಿತು.

ಬೆಳ್ತಂಗಡಿ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಸಿಸ್ಟರ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜಯ್ ಕಲ್ಲೇಗ ಸಹಕರಿಸಿದರು.

ಇದೇ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಧರ್ಮಪಾಲ ಅವರು ಏಡ್ಸ್ ಹಾಗೂ ಎಚ್.ಐ.ವಿ. ರೋಗದ ಲಕ್ಷಣ, ಹರಡುವ ವಿಧಾನ, ಇತ್ಯಾದಿ ವಿಷಯ ಕುರಿತ ಮಾಹಿತಿ ನೀಡಿದರು.

ಎಸ್.ಡಿ.ಎಂ. ಮಹಿಳಾ ಐಟಿಐ ಸಂಸ್ಥೆಯ ವಿದ್ಯಾರ್ಥಿಗಳು ಏಡ್ಸ್ ಜಾಗೃತಿ ಕುರಿತ ಪ್ರಹಸನ ಪ್ರಸ್ತುತಪಡಿಸಿದರು.

ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿಗಳು, ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಕಿರಿಯ ತರಬೇತಿ ಅಧಿಕಾರಿಗಳಾದ ಸಂದ್ಯಾ ಸ್ವಾಗತಿಸಿ, ನಿಧಿ ನಿರೂಪಿಸಿದರು.

Related posts

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!