July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

ಬೆಳ್ತಂಗಡಿ: ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯಿಂದಾಗಿ ದಿನೇ ದಿನೇ ಸಮಸ್ಯೆಗಳು ಎದುರಾಗುತ್ತಿದ್ದು, ಯಾವ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಇದರತ್ತ ಗಮನಹರಿಸದಿರುವುದು ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿ ಆಪಾದಿಸಿದೆ.

ಈ ರಸ್ತೆಯ ಮರುಡಾಮರೀಕರಣಕ್ಕೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಿ, ಡಿ.ವೈ.ಎಫ್.ಐ. ಈ ಹೇಳಿಕೆ ನೀಡಿದೆ. ಇಲ್ಲಿನ ರಸ್ತೆ ಹೊಂಡ-ಗುಂಡಿಗಳನ್ನು ಒಳಗೊಂಡು ಮರಣ ಬಾವಿಯಂತೆ ಬಾಯಿ ಬಿಡುತ್ತಿದೆ ಎಂದು ಡಿ.ವೈ.ಎಫ್.ಐ. ತಾಲೂಕು ಅದ್ಯಕ್ಷರಾದ ಅಧಿತಿ ಕೊಯ್ಯೂರು ಹಾಗೂ ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಅವರು ತಿಳಿಸಿದ್ದಾರೆ. ಇದೇ ಮಾರ್ಗದಲ್ಲಿ ಇತ್ತೀಚಿಗೆ ಬಂದ ನಮ್ಮ ಮೈಸೂರು ಮಹಾರಾಜರು ಅದು ಹೇಗೆ ಬಂದರೋ ಯಾರಿಗೂ ತಿಳಿದಿಲ್ಲ ಎಂದು ಹೇಳಿದರು. ಇಲ್ಲಿನ ಜನರು ಇಲ್ಲಿನ ಗುಂಡಿಗಳಲ್ಲಿ ಬಾಳೆ ಗಿಡಗಳನ್ನು ನೆಟ್ಟು ತಮ್ಮ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಅದಲ್ಲದೆ ರಸ್ತೆ ಬದಿಯ ಅಂಗಡಿ ವ್ಯಾಪಾರಸ್ತರ ಪಾಡು ಯಾರಿಗೂ ಬೇಡ. ಇಲ್ಲಿ ಸಂಚರಿಸುವ, ವಿದ್ಯಾರ್ಥಿಗಳು, ಇತರೆ ಜನಸಾಮಾನ್ಯರು ಹಾಗೆಯೇ ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಕೂಡ ಮಣ್ಣು, ದೂಳುಗಳನ್ನು ಉಸಿರಾಡಿ ಜೀವಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ DYFI ಯುವಜನ ಸಂಘಟನೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕರಿಗೆ ಇಂಜಿನಿಯರ್ ಗೆ ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗ ಪ್ರಾರಂಭಿಸಬೇಕೆಂದು ಮನವಿ ಮಾಡಲಾಯಿತು. ಇಲ್ಲವಾದಲ್ಲಿ ಕುಪ್ಪೆಟ್ಟಿಯಲ್ಲಿ ಈ ತಿಂಗಳ ಅಂತ್ಯದೊಳಗೆ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ತಿಳಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಕಾರ್ಯಪಾಲಕರಾದ ಬಕ್ಕಪ್ಪ ರವರು ಈಗಾಗಲೇ ಸರಕಾರದಿಂದ ತಮಗೆ, “ಪ್ಯಾಚ್ ವರ್ಕ್ ” ಮಾಡಲು ಮಾತ್ರ ಅನುದಾನ ಬಂದಿರುವುದು, ರಸ್ತೆ ಕಾಮಗಾರಿಗೆ ಹಣ ಇನ್ನೂ ಬಂದಿಲ್ಲ ಮುಂದಿನ ಎರಡು-ಮೂರು ತಿಂಗಲೊಳಗೆ ಬರಬಹುದು ಎಂದು ತಿಳಿಸಿದ್ದಾರೆ. ಆದರೆ ಈ ಪ್ಯಾಚ್ ವರ್ಕ್ ಕೆಲಸವನ್ನು ಆದಷ್ಟು ಬೇಗ ಪ್ರಾರಂಭಿಸುವುದಾಗಿ ಮಾತು ನೀಡಿರುತ್ತಾರೆ.

ಈ ಸಂದರ್ಭದಲ್ಲಿ DYFI ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಕಾರ್ಯದರ್ಶಿಗಳ ಜೊತೆ ಸಹಕಾರ್ಯದರ್ಶಿಗಳಾದ ವಿನುಷರಮಣ ಪಟ್ರಮೆ, ಅಶ್ವಿತಾ ಕುತ್ಲೂರು, ಸದಸ್ಯರಾದ ಈಶ್ವರಿ ಪದ್ಮುಂಜ ಮತ್ತಿತರರು ಉಪಸ್ಥಿತರಿದ್ದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya
error: Content is protected !!