ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

ಕರಾಯ: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಡಿ.20 ರಂದು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆ, ಕರಾಯದಲ್ಲಿ ನಡೆಯಲಿದೆ.

ಬೆಳಿಗ್ಗೆ ನೋಂದಣಿ, ಉಪಹಾರ, ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ, ಹೈನುಗಾರಿಕೆ ಮಾಹಿತಿ, ಕರುಗಳ ಮೌಲ್ಯಮಾಪನ, ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಜೆರ್ಸಿ, ಹೆಚ್.ಎಫ್., ಇತರ ತಳಿಗಳು ಮತ್ತು ಎಮ್ಮೆ ಕರುಗಳ ವಿಭಾಗಗಳಲ್ಲಿ ಮತ್ತು 0-4, 5-8 ಹಾಗೂ 9-12 ತಿಂಗಳ ವಯೋ ಗುಂಪುಗಳಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ.

ಒಕ್ಕೂಟದ ಪಶುವೈದ್ಯರು ಪ್ರದರ್ಶನದಲ್ಲಿ ಭಾಗವಹಿಸಲಿರುವ ಕರುಗಳ ಆಯ್ಕೆ ಮತ್ತು ನೋಂದಣಿಯನ್ನು ಮುಂಚಿತವಾಗಿಯೇ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ. ಹಾಲು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, (ಪ.ಸಂ.) ಕ.ಹಾ.ಮ. ಬೆಂಗಳೂರು ನಿರ್ದೇಶಕ ಡಾ. ಬಸವರಾಜ್, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ದ.ಕ ಒಕ್ಕೂಟದ ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಐಕಾನ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!