ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ನಾರಾವಿ ಹಾಲು ಉತ್ಪಾದಕರ ಸಹಕಾರಿ ಸಂಘ, ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘ, ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಜಂಟಿ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ. 21 ರಂದು ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿರುವುದು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸುವರು. ನಾರಾವಿ ಪ್ಯಾಕ್ಸ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಅಧ್ಯಕ್ಷತೆ ವಹಿಸುವರು. ನಾರಾವಿ ಗ್ರಾ.ಪಂ.ಅಧ್ಯಕ್ಷ ರಾಜವರ್ಮ ಜೈನ್, ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಅರಿವಳಿಕೆ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ. ಮೆಹೆಂದಳೆ, ಹೊಸ್ಮಾರು ವಿಜಯಾ ಪಾಲಿಕ್ಲಿನಿಕ್ ಡಾ| ಪ್ರಸಾದ್ ಬಿ. ಶೆಟ್ಟಿ, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ ನಾರಾವಿ ಭಾಗವಹಿಸಲಿದ್ದಾರೆ.











