September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ ಪರಿಸರದಲ್ಲಿ ಕಳೆದ ೪-೫ ದಿನಗಳಿಂದ ಎರಡು ಚಿರತೆಗಳು ಹಗಲಿನಲ್ಲೇ ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಡಿ.೧೭ ರಂದು ಸಂಜೆ ವೇಳೆಗೆ ದಾರಿ ಮಧ್ಯೆ ಚಿರತೆ ಇರುವುದನ್ನು ವ್ಯಕ್ತಿಯೊಬ್ಬರು ಕಂಡಿದ್ದಾರೆ. ಬಂಟ್ವಾಳದ ಅಜ್ಜಿಬೆಟ್ಟು ಹಾಗೂ ಬೆಳ್ತಂಗಡಿಯ ಹೊಸಪಟ್ಣದಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ರಾತ್ರಿ ವೇಳೆ ಚಿರತೆ ಕೂಗುವ ಶಬ್ದ ಕೇಳಿ ಜನರು ಭಯಭೀತರಾಗಿದ್ದಾರೆ.


ಹೊಸಪಟ್ಣವಾಗಿ ವಿವಿಧ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಹೋಗುತ್ತಿದ್ದು ಪೊಷಕರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಾರಿ ಮಧ್ಯೆ ಗಿಡಗಂಟಿಗಳು ಬೆಳೆದಿದ್ದು ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಚಿರತೆ ಎಲ್ಲಿ ಇದರಲ್ಲಿ ಅವಿತುಕೊಳ್ಳುತ್ತದೆ ಎಂಬ ಭಯ ಜನರಲ್ಲಿದೆ. ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಲಾಗಿದೆ. ಆದರೆ ಬೋನ್ ಅಳವಡಿಸುವ ಕಾರ್ಯ ಆಗಿಲ್ಲ. ಚಿರತೆ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಕಾಣಸಿಗುತ್ತಿದ್ದು ನಿತ್ಯ ಕೆಲಸಕ್ಕೆ ಹೋಗುವ ಮಂದಿ ಜೀವಭಯದಿಂದ ಸಂಚರಿಸುತ್ತಿದ್ದಾರೆ. ಸುತ್ತಮುತ್ತಲಿನ ಜನರು ಪಟಾಕಿ ಸಿಡಿಸಿ ಕಾಡಿಗೆ ಹಟ್ಟಿದರು, ಚಿರತೆ ಮತ್ತೆ ನಾಡಿನತ್ತ ಬರುತ್ತಿದೆ. ಕಳೆದ ರಾತ್ರಿ ಬೈಕ್ ಸವಾರೊಬ್ಬರು ಚಿರತೆ ಹಾವಳಿಯಿಂದ ಭಯಭೀತರಾಗಿ ಮನೆ ಸೇರಿದ ಘಟನೆ ನಡೆದಿದೆ. ಯಾವುದೇ ಅನಾಹುತ ಸಂಭವಿಸಿಸುವ ಮೊದಲು ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಊರವರು ಆಗ್ರಹಿಸಿದ್ದಾರೆ.

Related posts

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya
error: Content is protected !!