25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು.

ಅಗ್ರಿಲೀಫ್ ಸಂಸ್ಥೆ ಪ್ರತಿನಿಧಿಯಾಗಿ ಜಗನ್ನಾಥ್ ಅವರು ಮಂಗಳೂರಿನ ಕೈಗಾರಿಕಾ ನಿಗಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಮೈಲಿಗಲ್ಲು ಸಾಧಿಸಲು ಕಾರಣಕರ್ತರಾದ ಅಗ್ರಿಲೀಫ್ ಸಿಬ್ಬಂದಿಯ ಸಮರ್ಪಣಾ ಭಾವ, ಬೆಂಬಲ ಮತ್ತು ಅಮೂಲ್ಯ ಕೊಡುಗೆಗಾಗಿ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಂಸ್ಥೆಯ ಸಿಇಒ ಮತ್ತು ಮುಖ್ಯಸ್ಥ ಅವಿನಾಶ್ ರಾವ್ ಹೇಳಿದ್ದಾರೆ.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya
error: Content is protected !!