March 7, 2026
ಚಿತ್ರ ವರದಿತಾಲೂಕು ಸುದ್ದಿ

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

ಮಡಂತ್ಯಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನಿರ್ದೇಶನದಡಿಯಲ್ಲಿ, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರ್ ಇದರ ನೇತೃತ್ವದಲ್ಲಿ ಡಿ.20 ಮತ್ತು 21ರಂದು ಮಡಂತ್ಯಾರು “ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ( ಕ್ಯಾಂಪೋರಿ 2025- 26)2025 26 ನೇ ಸಾಲಿನ ರೋವರ್ಸ್ ರೇಂಜರ್ಸ್ ಸಮಾಗಮ, ಸೈಟ್ಸ್ – ಗೈಡ್ಸ್ ಮೇಳ ಮತ್ತು ಕಬ್- ಬುಲ್ ಬುಲ್ಸ್ ಉತ್ಸವ ನಡೆಯಲಿದೆ.

ಈ ಕ್ಯಾಂಪೋರಿಯಲ್ಲಿ ಧ್ವಜಾರೋಹಣ, ಧ್ವಜ ಸ್ಥಂಭ ರಚನೆ, ಸುಧಾರಿತ ಗುಡಾರ ರಚನೆ, ಗ್ಯಾಡ್ಜ್ಟ್ ತಯಾರಿ, ಬೆಂಕಿ ಬಳಸದೆ ಅಡುಗೆ ತಯಾರಿ, ಕರಕುಶಲ ವಸ್ತುಗಳ ತಯಾರಿ, ಗ್ರೀಟಿಂಗ್ ಕಾರ್ಡ್ ತಯಾರಿ, 2026 ನೇ ಸಾಲಿನ ಕ್ಯಾಲೆಂಡರ್ ತಯಾರಿ, ಗಾಳಿಪಟ ತಯಾರಿ, ಕಬ್ ವಂದನೆ, ಬುಲ್ ಬುಲ್ಸ್ ರಿಂಗ್, ಪೇಪರ್ ಕ್ರಾಪ್ಟ್, ಧಾನ್ಯದಿಂದ ಆಕೃತಿ ತಯಾರಿ, ಚಿತ್ರ ರಚನೆ, ಮುಂತಾದ ವಿವಿಧ ಕೌಶಲ್ಯ ಚಟುವಟಿಕೆಗಳು, ಸಾಹಸಮಯ ಚಟುವಟಿಕೆಗಳು, ಬೈಂಡ್ ಗೇಮ್, ಪಥಸಂಚಲನ, ನಗರ ಮೆರವಣಿಗೆ, ಶಿಬಿರಾಗ್ನಿ, ಸರ್ವಧರ್ಮ ಪ್ರಾರ್ಥನೆ, ಹೊರ ಸಂಚಾರ, ಈ ರೀತಿ ಹತ್ತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ.

ಈ ಕಾರ್ಯಕ್ರಮಗಳಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಸೌಟ್ -ಗೈಡ್ ಮುಖ್ಯ ಆಯುಕ್ತರಾದ ಡಾ| ಎಂ ಮೋಹನ ಆಳ್ವ, ಶ್ರೀ ಕ್ಷೇತ್ರ ಬಳ್ಳಮಂಜದ ಆಡಳಿತ ಮೊಕೇಸರರಾದ ಡಾಕ್ಟರ ಹರ್ಷ ಸಂಪಿಗೆತ್ತಾಯಾ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮಡಂತ್ಯಾರ್‌ನ ಉದ್ಯಮಿ ಪ್ರಶಾಂತ ಶೆಟ್ಟಿ, ಮಡಂತ್ಯಾರ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ರೂಪಾ ನವೀನ್ ಕೊಡ್ಲಕ್ಕೆ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಸೈಟ್- ಗೈಡ್ ಮಡಂತ್ಯಾರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್‌ರವರು ಮತ್ತು ರ್ಯಾಲಿ ನಿರ್ದೇಶಕರಾದ ಚಿದಾನಂದರವರು ಪತ್ರಿಕ ಹೇಳಿಕೆಯಲ್ಲಿ ತಿಳಿಸಿರುತ್ತಾರೆ

Related posts

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!