ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

ಬೆಳ್ತಂಗಡಿ:ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭವು ಹೋಲಿ ರೇಡಿಮರ್ ಆಡಿಟೋರಿಯಂನಲ್ಲಿ ಡಿ 19ರಂದು ನಡೆಯಿತು.

ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸರಕಾರಿ ವಕೀಲರಾದ ಮೆಲ್ವಿನ್ ಪ್ರಕಾಶ್ ನೊರೋನ್ಹಾ, ಬೆಳ್ತಂಗಡಿ ನ್ಯಾಯಾಲಯದ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ. ಎಮ್. ಎಫ್.ಸಿ ಮನು ಬಿ.ಕೆ,ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ,ನಿಕಟ ಪೂರ್ವಾಧ್ಯಕ್ಷ ವಸಂತ ಮರಕಡ,ಉಪಾಧ್ಯಕ್ಷ ಶ್ರೀನಿವಾಸ್ ಗೌಡ,ಜತೆ ಕಾರ್ಯದರ್ಶಿ ಹರ್ಷಿತ್,ಕೋಶಾಧಿಕಾರಿ ಮುಮ್ತಾಜ್ ಬೇಗಂ,ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಶಿವಕುಮಾರ್,ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿಕೆ ಉಪಸ್ಥಿತರಿದ್ದರು.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಅವರು ಸ್ವಾಗತಿಸಿದರು. ಹಿರಿಯ ನ್ಯಾಯವಾದಿ ಬಿ.ಕೆ ಧನಂಜಯ್ ರಾವ್,ವಕೀಲರಾದ ಕೃಷ್ಣ ಶೆಣೈ ನಿರೂಪಿಸಿದರು.

Related posts

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya
error: Content is protected !!