25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya
error: Content is protected !!