ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!