September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಹೆಚ್ಚುವರಿ ಬಿಲ್, ಅನಿಯಮಿತ ನೀರು ಸರಬರಾಜು ಹಾಗೂ ಬೀದಿ ದೀಪಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕೆಂದು ಕೋರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಮನೆಗಳಿಗೆ ಇತ್ತೀಚೆಗೆ ವಿತರಿಸಲಾದ ನೀರಿನ ಬಿಲ್ಲುಗಳಲ್ಲಿ, ತಿಂಗಳ ನಿಗದಿತ ಶುಲ್ಕವನ್ನು ಹೊರತುಪಡಿಸಿ ಹೆಚ್ಚುವರಿ ನೀರಿನ ಬಳಕೆ ನಡೆದಿದೆ ಎಂದು ಸೂಚಿಸಿ, ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗಿದ್ದು, ಇದರಿಂದ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಭಾರೀ ಆರ್ಥಿಕ ಹೊರೆಯಾಗುತ್ತಿದೆ. ಇದಲ್ಲದೆ ಗ್ರಾಮದ ಕೆಲವೊಂದು ಪ್ರದೇಶಗಳಿಗೆ ಪ್ರತಿದಿನ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಡೆಗಳಲ್ಲಿ ದಿನಗಟ್ಟಲೆ ನೀರು ಸರಬರಾಜು ಇಲ್ಲದ ಪರಿಸ್ಥಿತಿಯೂ ಇದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ನೀರಿನ ಬಳಕೆ ಎಂದು ಹೆಚ್ಚುವರಿ ಬಿಲ್ ವಿಧಿಸಿರುವುದು ಜನರಲ್ಲಿ ಗೊಂದಲ ಮತ್ತು ಅಸಮಾಧಾನವನ್ನುಂಟು ಮಾಡಿದೆ. ಅದೇ ರೀತಿ, ಗ್ರಾಮದ ಹಲವೆಡೆ ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದರಿಂದ ರಾತ್ರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಭದ್ರತಾ ಸಮಸ್ಯೆಯೂ ಎದುರಾಗುತ್ತಿದೆ. ಆದುದರಿಂದ ನೀರಿನ ಬಿಲ್ಲುಗಳಲ್ಲಿ ವಿಧಿಸಿರುವ ಹೆಚ್ಚುವರಿ ಶುಲ್ಕವನ್ನು ಪುನರ್‌ಪರಿಶೀಲಿಸಿ ರದ್ದುಪಡಿಸಬೇಕು. ಎಲ್ಲಾ ಪ್ರದೇಶಗಳಿಗೆ ಸಮರ್ಪಕ ಹಾಗೂ ನಿಯಮಿತ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ಶೀಘ್ರದಲ್ಲಿ ದುರಸ್ತಿ ಮಾಡಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದಕ್ಕೂ ಮುಂಚೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಂಕಷ್ಟಗಳ ಮಾಹಿತಿಗಳನ್ನು ಕಲೆ ಹಾಕಿ ಸಹಿ ಸಂಗ್ರಹ ಮಾಡಲಾಗಿದ್ದ ಪ್ರತಿಯನ್ನು ಮನವಿಯೊಂದಿಗೆ ಲಗತ್ತಿಸಿ ನೀಡಲಾಯಿತು.

ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷರಾದ ಮುಹಮ್ಮದ್ ಸ್ವಾದಿಕ್ ನಾವೂರು, ಜೊತೆ ಕಾರ್ಯದರ್ಶಿ ಸಲೀಂ ಮುರ, ಖಾದರ್ ನಾವೂರು, ನೌಶಾದ್ ಕೈಕಂಬ, ಇಬ್ರಾಹಿಂ ಮುರ, ಹಸೈನಾರ್ ಸೇರಿದಂತೆ ಊರಿನ ಮಹಿಳೆಯರು ಉಪಸ್ಥಿತರಿದ್ದರು.

Related posts

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!