24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಡಿ.19 ರಂದು ದೀಪ ಪ್ರಜ್ವಲನೆ ಮಾಡುವ ಮೂಲಕ ಶುಭ ಕೋರಿದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ವೇದಿಕೆಯಲ್ಲಿ ಉಜಿರೆ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬಾಗಲಕೋಟೆ ವಿಶ್ವ ವಿದ್ಯಾನಿಲಯ ಕುಲಸಚಿವರಾದ ಡಾ.ಔದ್ರಮ, ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ, ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ,ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್,ವಿದ್ಯಾರ್ಥಿ ನಾಯಕಿ ಶೆಝ ಫಾತಿಮಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಲವಾರು ನಿವೃತ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕಿ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!