September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಡಿ.19 ರಂದು ದೀಪ ಪ್ರಜ್ವಲನೆ ಮಾಡುವ ಮೂಲಕ ಶುಭ ಕೋರಿದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ವೇದಿಕೆಯಲ್ಲಿ ಉಜಿರೆ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬಾಗಲಕೋಟೆ ವಿಶ್ವ ವಿದ್ಯಾನಿಲಯ ಕುಲಸಚಿವರಾದ ಡಾ.ಔದ್ರಮ, ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ, ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ,ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್,ವಿದ್ಯಾರ್ಥಿ ನಾಯಕಿ ಶೆಝ ಫಾತಿಮಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಲವಾರು ನಿವೃತ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕಿ ನಿರೂಪಿಸಿದರು.

Related posts

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!