24.8 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿ

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

ಮಡಂತ್ಯಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನಿರ್ದೇಶನದಡಿಯಲ್ಲಿ, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರ್ ಇದರ ನೇತೃತ್ವದಲ್ಲಿ ಡಿ.20 ಮತ್ತು 21ರಂದು ಮಡಂತ್ಯಾರು “ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ( ಕ್ಯಾಂಪೋರಿ 2025- 26)2025 26 ನೇ ಸಾಲಿನ ರೋವರ್ಸ್ ರೇಂಜರ್ಸ್ ಸಮಾಗಮ, ಸೈಟ್ಸ್ – ಗೈಡ್ಸ್ ಮೇಳ ಮತ್ತು ಕಬ್- ಬುಲ್ ಬುಲ್ಸ್ ಉತ್ಸವ ನಡೆಯಲಿದೆ.

ಈ ಕ್ಯಾಂಪೋರಿಯಲ್ಲಿ ಧ್ವಜಾರೋಹಣ, ಧ್ವಜ ಸ್ಥಂಭ ರಚನೆ, ಸುಧಾರಿತ ಗುಡಾರ ರಚನೆ, ಗ್ಯಾಡ್ಜ್ಟ್ ತಯಾರಿ, ಬೆಂಕಿ ಬಳಸದೆ ಅಡುಗೆ ತಯಾರಿ, ಕರಕುಶಲ ವಸ್ತುಗಳ ತಯಾರಿ, ಗ್ರೀಟಿಂಗ್ ಕಾರ್ಡ್ ತಯಾರಿ, 2026 ನೇ ಸಾಲಿನ ಕ್ಯಾಲೆಂಡರ್ ತಯಾರಿ, ಗಾಳಿಪಟ ತಯಾರಿ, ಕಬ್ ವಂದನೆ, ಬುಲ್ ಬುಲ್ಸ್ ರಿಂಗ್, ಪೇಪರ್ ಕ್ರಾಪ್ಟ್, ಧಾನ್ಯದಿಂದ ಆಕೃತಿ ತಯಾರಿ, ಚಿತ್ರ ರಚನೆ, ಮುಂತಾದ ವಿವಿಧ ಕೌಶಲ್ಯ ಚಟುವಟಿಕೆಗಳು, ಸಾಹಸಮಯ ಚಟುವಟಿಕೆಗಳು, ಬೈಂಡ್ ಗೇಮ್, ಪಥಸಂಚಲನ, ನಗರ ಮೆರವಣಿಗೆ, ಶಿಬಿರಾಗ್ನಿ, ಸರ್ವಧರ್ಮ ಪ್ರಾರ್ಥನೆ, ಹೊರ ಸಂಚಾರ, ಈ ರೀತಿ ಹತ್ತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ.

ಈ ಕಾರ್ಯಕ್ರಮಗಳಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಸೌಟ್ -ಗೈಡ್ ಮುಖ್ಯ ಆಯುಕ್ತರಾದ ಡಾ| ಎಂ ಮೋಹನ ಆಳ್ವ, ಶ್ರೀ ಕ್ಷೇತ್ರ ಬಳ್ಳಮಂಜದ ಆಡಳಿತ ಮೊಕೇಸರರಾದ ಡಾಕ್ಟರ ಹರ್ಷ ಸಂಪಿಗೆತ್ತಾಯಾ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮಡಂತ್ಯಾರ್‌ನ ಉದ್ಯಮಿ ಪ್ರಶಾಂತ ಶೆಟ್ಟಿ, ಮಡಂತ್ಯಾರ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ರೂಪಾ ನವೀನ್ ಕೊಡ್ಲಕ್ಕೆ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಸೈಟ್- ಗೈಡ್ ಮಡಂತ್ಯಾರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್‌ರವರು ಮತ್ತು ರ್ಯಾಲಿ ನಿರ್ದೇಶಕರಾದ ಚಿದಾನಂದರವರು ಪತ್ರಿಕ ಹೇಳಿಕೆಯಲ್ಲಿ ತಿಳಿಸಿರುತ್ತಾರೆ

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!