July 23, 2026
ಚಿತ್ರ ವರದಿತಾಲೂಕು ಸುದ್ದಿ

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

ಮಡಂತ್ಯಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನಿರ್ದೇಶನದಡಿಯಲ್ಲಿ, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರ್ ಇದರ ನೇತೃತ್ವದಲ್ಲಿ ಡಿ.20 ಮತ್ತು 21ರಂದು ಮಡಂತ್ಯಾರು “ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ( ಕ್ಯಾಂಪೋರಿ 2025- 26)2025 26 ನೇ ಸಾಲಿನ ರೋವರ್ಸ್ ರೇಂಜರ್ಸ್ ಸಮಾಗಮ, ಸೈಟ್ಸ್ – ಗೈಡ್ಸ್ ಮೇಳ ಮತ್ತು ಕಬ್- ಬುಲ್ ಬುಲ್ಸ್ ಉತ್ಸವ ನಡೆಯಲಿದೆ.

ಈ ಕ್ಯಾಂಪೋರಿಯಲ್ಲಿ ಧ್ವಜಾರೋಹಣ, ಧ್ವಜ ಸ್ಥಂಭ ರಚನೆ, ಸುಧಾರಿತ ಗುಡಾರ ರಚನೆ, ಗ್ಯಾಡ್ಜ್ಟ್ ತಯಾರಿ, ಬೆಂಕಿ ಬಳಸದೆ ಅಡುಗೆ ತಯಾರಿ, ಕರಕುಶಲ ವಸ್ತುಗಳ ತಯಾರಿ, ಗ್ರೀಟಿಂಗ್ ಕಾರ್ಡ್ ತಯಾರಿ, 2026 ನೇ ಸಾಲಿನ ಕ್ಯಾಲೆಂಡರ್ ತಯಾರಿ, ಗಾಳಿಪಟ ತಯಾರಿ, ಕಬ್ ವಂದನೆ, ಬುಲ್ ಬುಲ್ಸ್ ರಿಂಗ್, ಪೇಪರ್ ಕ್ರಾಪ್ಟ್, ಧಾನ್ಯದಿಂದ ಆಕೃತಿ ತಯಾರಿ, ಚಿತ್ರ ರಚನೆ, ಮುಂತಾದ ವಿವಿಧ ಕೌಶಲ್ಯ ಚಟುವಟಿಕೆಗಳು, ಸಾಹಸಮಯ ಚಟುವಟಿಕೆಗಳು, ಬೈಂಡ್ ಗೇಮ್, ಪಥಸಂಚಲನ, ನಗರ ಮೆರವಣಿಗೆ, ಶಿಬಿರಾಗ್ನಿ, ಸರ್ವಧರ್ಮ ಪ್ರಾರ್ಥನೆ, ಹೊರ ಸಂಚಾರ, ಈ ರೀತಿ ಹತ್ತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ.

ಈ ಕಾರ್ಯಕ್ರಮಗಳಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಸೌಟ್ -ಗೈಡ್ ಮುಖ್ಯ ಆಯುಕ್ತರಾದ ಡಾ| ಎಂ ಮೋಹನ ಆಳ್ವ, ಶ್ರೀ ಕ್ಷೇತ್ರ ಬಳ್ಳಮಂಜದ ಆಡಳಿತ ಮೊಕೇಸರರಾದ ಡಾಕ್ಟರ ಹರ್ಷ ಸಂಪಿಗೆತ್ತಾಯಾ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮಡಂತ್ಯಾರ್‌ನ ಉದ್ಯಮಿ ಪ್ರಶಾಂತ ಶೆಟ್ಟಿ, ಮಡಂತ್ಯಾರ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ರೂಪಾ ನವೀನ್ ಕೊಡ್ಲಕ್ಕೆ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಸೈಟ್- ಗೈಡ್ ಮಡಂತ್ಯಾರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್‌ರವರು ಮತ್ತು ರ್ಯಾಲಿ ನಿರ್ದೇಶಕರಾದ ಚಿದಾನಂದರವರು ಪತ್ರಿಕ ಹೇಳಿಕೆಯಲ್ಲಿ ತಿಳಿಸಿರುತ್ತಾರೆ

Related posts

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!