22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಪುದುವೆಟ್ಟು : ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು .

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ಸ್ಥಳೀಯರಾದ ಉಪನ್ಯಾಸಕ ಹರಿಪ್ರಸಾದ್ ಡೆಚ್ಚಾರ್ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕ ಪ್ರತಿಭಾ ದಿನಾಚರಣೆಗೆ ಚಾಲನೆಯನ್ನು ನೀಡಿ ಮಾತನಾಡಿ ವಾರ್ಷಿಕ ಪ್ರತಿಭಾ ದಿನಾಚರಣೆ ಎಂಬುದು ವಿದ್ಯಾರ್ಥಿಗಳ ಪಾಲಿನ ಒಂದು ಸಂಭ್ರಮವಿದ್ದಂತೆ ಎಲ್ಲರೂ ಈ ದಿನದಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಪ್ರದರ್ಶನ ಮಾಡಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಉಪಸ್ಥಿತರಿದ್ದರು, ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಸ್ವಾಗತಿಸಿದರು, ಶಾಲಾ ಶಿಕ್ಷಕ ಗೌರೀಶ್ ಎಂ ಧನ್ಯವಾದಗೈದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕ ಬಂಧುಗಳು ಉಪಸ್ಥಿತರಿದ್ದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya
error: Content is protected !!