23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

ಬೆಳ್ತಂಗಡಿ:ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭವು ಹೋಲಿ ರೇಡಿಮರ್ ಆಡಿಟೋರಿಯಂನಲ್ಲಿ ಡಿ 19ರಂದು ನಡೆಯಿತು.

ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸರಕಾರಿ ವಕೀಲರಾದ ಮೆಲ್ವಿನ್ ಪ್ರಕಾಶ್ ನೊರೋನ್ಹಾ, ಬೆಳ್ತಂಗಡಿ ನ್ಯಾಯಾಲಯದ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ. ಎಮ್. ಎಫ್.ಸಿ ಮನು ಬಿ.ಕೆ,ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ,ನಿಕಟ ಪೂರ್ವಾಧ್ಯಕ್ಷ ವಸಂತ ಮರಕಡ,ಉಪಾಧ್ಯಕ್ಷ ಶ್ರೀನಿವಾಸ್ ಗೌಡ,ಜತೆ ಕಾರ್ಯದರ್ಶಿ ಹರ್ಷಿತ್,ಕೋಶಾಧಿಕಾರಿ ಮುಮ್ತಾಜ್ ಬೇಗಂ,ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಶಿವಕುಮಾರ್,ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿಕೆ ಉಪಸ್ಥಿತರಿದ್ದರು.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಅವರು ಸ್ವಾಗತಿಸಿದರು. ಹಿರಿಯ ನ್ಯಾಯವಾದಿ ಬಿ.ಕೆ ಧನಂಜಯ್ ರಾವ್,ವಕೀಲರಾದ ಕೃಷ್ಣ ಶೆಣೈ ನಿರೂಪಿಸಿದರು.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya
error: Content is protected !!