23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!