ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!