July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya
error: Content is protected !!