23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಹೆಚ್ಚುವರಿ ಬಿಲ್, ಅನಿಯಮಿತ ನೀರು ಸರಬರಾಜು ಹಾಗೂ ಬೀದಿ ದೀಪಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕೆಂದು ಕೋರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಮನೆಗಳಿಗೆ ಇತ್ತೀಚೆಗೆ ವಿತರಿಸಲಾದ ನೀರಿನ ಬಿಲ್ಲುಗಳಲ್ಲಿ, ತಿಂಗಳ ನಿಗದಿತ ಶುಲ್ಕವನ್ನು ಹೊರತುಪಡಿಸಿ ಹೆಚ್ಚುವರಿ ನೀರಿನ ಬಳಕೆ ನಡೆದಿದೆ ಎಂದು ಸೂಚಿಸಿ, ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗಿದ್ದು, ಇದರಿಂದ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಭಾರೀ ಆರ್ಥಿಕ ಹೊರೆಯಾಗುತ್ತಿದೆ. ಇದಲ್ಲದೆ ಗ್ರಾಮದ ಕೆಲವೊಂದು ಪ್ರದೇಶಗಳಿಗೆ ಪ್ರತಿದಿನ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಡೆಗಳಲ್ಲಿ ದಿನಗಟ್ಟಲೆ ನೀರು ಸರಬರಾಜು ಇಲ್ಲದ ಪರಿಸ್ಥಿತಿಯೂ ಇದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ನೀರಿನ ಬಳಕೆ ಎಂದು ಹೆಚ್ಚುವರಿ ಬಿಲ್ ವಿಧಿಸಿರುವುದು ಜನರಲ್ಲಿ ಗೊಂದಲ ಮತ್ತು ಅಸಮಾಧಾನವನ್ನುಂಟು ಮಾಡಿದೆ. ಅದೇ ರೀತಿ, ಗ್ರಾಮದ ಹಲವೆಡೆ ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದರಿಂದ ರಾತ್ರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಭದ್ರತಾ ಸಮಸ್ಯೆಯೂ ಎದುರಾಗುತ್ತಿದೆ. ಆದುದರಿಂದ ನೀರಿನ ಬಿಲ್ಲುಗಳಲ್ಲಿ ವಿಧಿಸಿರುವ ಹೆಚ್ಚುವರಿ ಶುಲ್ಕವನ್ನು ಪುನರ್‌ಪರಿಶೀಲಿಸಿ ರದ್ದುಪಡಿಸಬೇಕು. ಎಲ್ಲಾ ಪ್ರದೇಶಗಳಿಗೆ ಸಮರ್ಪಕ ಹಾಗೂ ನಿಯಮಿತ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ಶೀಘ್ರದಲ್ಲಿ ದುರಸ್ತಿ ಮಾಡಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದಕ್ಕೂ ಮುಂಚೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಂಕಷ್ಟಗಳ ಮಾಹಿತಿಗಳನ್ನು ಕಲೆ ಹಾಕಿ ಸಹಿ ಸಂಗ್ರಹ ಮಾಡಲಾಗಿದ್ದ ಪ್ರತಿಯನ್ನು ಮನವಿಯೊಂದಿಗೆ ಲಗತ್ತಿಸಿ ನೀಡಲಾಯಿತು.

ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷರಾದ ಮುಹಮ್ಮದ್ ಸ್ವಾದಿಕ್ ನಾವೂರು, ಜೊತೆ ಕಾರ್ಯದರ್ಶಿ ಸಲೀಂ ಮುರ, ಖಾದರ್ ನಾವೂರು, ನೌಶಾದ್ ಕೈಕಂಬ, ಇಬ್ರಾಹಿಂ ಮುರ, ಹಸೈನಾರ್ ಸೇರಿದಂತೆ ಊರಿನ ಮಹಿಳೆಯರು ಉಪಸ್ಥಿತರಿದ್ದರು.

Related posts

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!